ನೀವೂ ಕಾನನಕ್ಕೆ ಬರೆಯಬಹುದು

ನೀವೂ ಕಾನನಕ್ಕೆ ಬರೆಯಬಹುದು

  ©ai-generated-8241452_1280

ರಷ್ಯಾ ಮತ್ತು ಉಕ್ರೇನ್ ನ ನಡುವೆ ನಡೆದ ಯುದ್ಧದ ಬಗ್ಗೆ ನಿಮಗೆಲ್ಲಾ ತಿಳಿದೇ ಇದೆ. ಈ ಯುದ್ದದಿಂದ ಎಷ್ಟೋ ಜನರ ಪ್ರಾಣ ಹಾನಿಯಾಗಿದೆ, ಎಷ್ಟೊಂದು ಸಂಪತ್ತು ನಾಶವಾಗಿದೆ. ಯುದ್ಧ ಎಂದೊಡನೆ ನಮ್ಮ ತಲೆಯಲ್ಲಿ ಬರುವುದು ಜನರ ಸಾವು ನೋವು ಮತ್ತು ಸಂಪತ್ತಿನ ನಷ್ಟ ಮಾತ್ರ. ಆದರೆ ಆ ಯುದ್ಧದಿಂದ ಪ್ರಕೃತಿಯ ಮೇಲೆ ಹಾಗು ವನ್ಯಜೀವಿಗಳ ಮೇಲೆ ಆದ ದುಷ್ಪರಿಣಾಮಗಳನ್ನು ನಾವು ಯೋಚಿಸುವುದೇ ಇಲ್ಲ! ಒಮ್ಮೆ ಹಾಗೆ ಯೋಚಿಸಿದರೆ ಯುದ್ಧಗಳು ನಡೆಯುವುದಕ್ಕೆ ನೈಸರ್ಗಿಕ ಸಂಪನ್ಮೂಲಗಳು ಮುಖ್ಯ ಕಾರಣ ಅಲ್ಲವೇ? ಇದನ್ನು ತಡೆಯಬೇಕು ಹಾಗು ಯುದ್ದದಿಂದ ಪರಿಸರದ ಮೇಲೆ ಆಗುವ ಶೋಷಣೆಯನ್ನು (ದುಷ್ಪರಿಣಾಮ) ತಡೆಗಟ್ಟಬೇಕು ಎಂಬ ಉದ್ದೇಶದಿಂದ ನವೆಂಬರ್ 6 ಅನ್ನು ‘ಯುದ್ಧ ಮತ್ತು ಸಶಸ್ತ್ರ ಸಂಘರ್ಷದಲ್ಲಿ ಪರಿಸರದ ಶೋಷಣೆಯನ್ನು ತಡೆಗಟ್ಟುವ ಅಂತರರಾಷ್ಟ್ರೀಯ ದಿನ’ ವೆಂದು ಆಚರಿಸಲಾಗುತ್ತದೆ.

 ಇದೇ ರೀತಿಯ ಮಾಹಿತಿಗಳನ್ನು ನೀಡಲು ನೀವೂ ಕಾನನಕ್ಕೆ ಬರೆಯಬಹುದು.      ಈ ರೀತಿಯ ಪರಿಸರದ ಬಗೆಗಿನ ಮಾಹಿತಿಯನ್ನು ಒದಗಿಸಲು ಇರುವ ಕಾನನ ಇ-ಮಾಸಿಕಕ್ಕೆ ಮುಂದಿನ ತಿಂಗಳ ಸಂಚಿಕೆಗೆ ಲೇಖನಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಪರಿಸರಕ್ಕೆ ಸಂಬಂಧಿಸಿದ ಕಥೆ, ಕವನ, ಛಾಯಾಚಿತ್ರ, ಚಿತ್ರಕಲೆ, ಪ್ರವಾಸ ಕಥನಗಳನ್ನು ಕಾನನ ಮಾಸಿಕದ ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದು.

ಕಾನನ ಪತ್ರಿಕೆಯ ಇ-ಮೇಲ್ ವಿಳಾಸ: [email protected]
ಅಂಚೆ ವಿಳಾಸ:

ಅಡವಿ ಫೀಲ್ಡ್ ಸ್ಟೇಷನ್,
ಒಂಟೆಮಾರನ ದೊಡ್ಡಿ ಗ್ರಾಮ ,
ರಾಗಿಹಳ್ಳಿ ಅಂಚೆ,
ಜಿಗಣಿ ಹೋಬಳಿ,
ಆನೇಕಲ್ ತಾಲ್ಲೂಕು ,
ಬೆಂಗಳೂರು ನಗರ ಜಿಲ್ಲೆ
ಪಿನ್ ಕೋಡ್: 560083. ಗೆ ಕಳಿಸಿಕೊಡಬಹುದು.

ವಿಶೇಷ ಮನವಿ: ಕಾನನ ಪತ್ರಿಕೆಯು ಯುವ ಜನರಲ್ಲಿ, ಮಕ್ಕಳಲ್ಲಿ ಪರಿಸರದ ಪಸರನ್ನು ಹರಡಲು ಮತ್ತು ಪ್ರಕೃತಿ ಬಗ್ಗೆ ಜಾಗೃತಿ ಮೂಡಿಸಲು ಇರುವ ಮುಕ್ತ ವೇದಿಕೆಯಾಗಿದೆ.  ಈ ಪತ್ರಿಕೆಯ ವಿನ್ಯಾಸ, ವಿಷಯವನ್ನು ಬದಲಿಸದೆ pdf ಪ್ರತಿಯನ್ನು ಯಥಾಸ್ಥಿತಿಯಲ್ಲಿ ಯಾರು ಬೇಕಾದರೂ ಪ್ರಿಂಟ್ ಮಾಡಿಸಿ ಓದಲು ಬಳಸಬಹುದು ಅಥವಾ ಪರಿಸರದ ಬಗ್ಗೆ ಅರಿವು ಮೂಡಿಸಲು ಶಾಲೆಗಳಿಗೆ ನೀಡಬಹುದು.

Print Friendly, PDF & Email
Spread the love
error: Content is protected.