ನೀವೂ ಕಾನನಕ್ಕೆ ಬರೆಯಬಹುದು

ನೀವೂ ಕಾನನಕ್ಕೆ ಬರೆಯಬಹುದು

  © ಧನರಾಜ್ ಎಂ

‘ವಿಶ್ವ ಪರ್ವತ ದಿನ’ ವನ್ನು ಪ್ರತೀ ವರ್ಷ ಡಿಸೆಂಬರ್ 11ನೇ ತಾರೀಕಿನಂದು ಆಚರಿಸಲಾಗುತ್ತದೆ.    ಪರ್ವತಗಳು ತಮ್ಮ ಇರುವಿಕೆಯಿಂದ ಭೂಮಿಯ ಸೌಂದರ್ಯವನ್ನು ಹೆಚ್ಚಿಸುವುದರ ಜೊತೆ ಜೊತೆಗೆ ಪ್ರಾಣಿಗಳಿಗೆ, ಮನುಷ್ಯರಿಗೆ ಹಾಗೂ ಹಲವು ಜೀವಿಗಳಿಗೆ ನಾನಾ ರೀತಿಯಲ್ಲಿ ಸಹಾಯ ಮಾಡುತ್ತವೆ. ವ್ಯವಸಾಯಕ್ಕೆ, ನಮ್ಮ ಎಲ್ಲಾ ದೈನಂದಿನ ಚಟುವಟಿಕೆಗಳಿಗೆ ಮೂಲವಾಗಿರುವ ನದಿಗಳು ಹುಟ್ಟುವುದು ಈ ಪರ್ವತಗಳ ತಪ್ಪಲಿನಲ್ಲಿಯೇ. ಇಷ್ಟು ಮಾತ್ರವಲ್ಲದೆ ಪರ್ವತಗಳು ಮೆಕ್ಕೆಜೋಳ, ಆಲೂಗಡ್ಡೆ, ಬಾರ್ಲಿ, ಸೋರ್ಗಮ್, ಟೊಮ್ಯಾ ಟೊ ಮತ್ತು ಸೇಬುಗಳನ್ನು ಬೆಳೆಯಲು ಸಹಕಾರಿಯಾಗಿವೆ. ಹಲವಾರು ಔಷಧೀಯ ಸಸ್ಯಗಳಿಗೆ ಪರ್ವತಗಳು ಆಶ್ರಯ ನೀಡುವಲ್ಲಿ, ಇಳೆಗೆ ಮಳೆ ತರುವಲ್ಲಿಯೂ ಸಹ ಪರ್ವತಗಳು ಬಹು ಮುಖ್ಯ ಪಾತ್ರವಹಿಸುತ್ತವೆ.  ಆದ್ದರಿಂದ ಪರ್ವತಗಳು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಪರಿಸರದ ಸಮತೋಲನಕ್ಕೆ ಕಾರಣವಾಗಿದೆ.

 ಇದೇ ರೀತಿಯ ಮಾಹಿತಿಗಳನ್ನು ನೀಡಲು ನೀವೂ ಕಾನನಕ್ಕೆ ಬರೆಯಬಹುದು.      ಈ ರೀತಿಯ ಪರಿಸರದ ಬಗೆಗಿನ ಮಾಹಿತಿಯನ್ನು ಒದಗಿಸಲು ಇರುವ ಕಾನನ ಇ-ಮಾಸಿಕಕ್ಕೆ ಮುಂದಿನ ತಿಂಗಳ ಸಂಚಿಕೆಗೆ ಲೇಖನಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಪರಿಸರಕ್ಕೆ ಸಂಬಂಧಿಸಿದ ಕಥೆ, ಕವನ, ಛಾಯಾಚಿತ್ರ, ಚಿತ್ರಕಲೆ, ಪ್ರವಾಸ ಕಥನಗಳನ್ನು ಕಾನನ ಮಾಸಿಕದ ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದು.

ಕಾನನ ಪತ್ರಿಕೆಯ ಇ-ಮೇಲ್ ವಿಳಾಸ: [email protected]
ಅಂಚೆ ವಿಳಾಸ:

ಅಡವಿ ಫೀಲ್ಡ್ ಸ್ಟೇಷನ್,
ಒಂಟೆಮಾರನ ದೊಡ್ಡಿ ಗ್ರಾಮ ,
ರಾಗಿಹಳ್ಳಿ ಅಂಚೆ,
ಜಿಗಣಿ ಹೋಬಳಿ,
ಆನೇಕಲ್ ತಾಲ್ಲೂಕು ,
ಬೆಂಗಳೂರು ನಗರ ಜಿಲ್ಲೆ
ಪಿನ್ ಕೋಡ್: 560083. ಗೆ ಕಳಿಸಿಕೊಡಬಹುದು.

ವಿಶೇಷ ಮನವಿ: ಕಾನನ ಪತ್ರಿಕೆಯು ಯುವ ಜನರಲ್ಲಿ, ಮಕ್ಕಳಲ್ಲಿ ಪರಿಸರದ ಪಸರನ್ನು ಹರಡಲು ಮತ್ತು ಪ್ರಕೃತಿ ಬಗ್ಗೆ ಜಾಗೃತಿ ಮೂಡಿಸಲು ಇರುವ ಮುಕ್ತ ವೇದಿಕೆಯಾಗಿದೆ.  ಈ ಪತ್ರಿಕೆಯ ವಿನ್ಯಾಸ, ವಿಷಯವನ್ನು ಬದಲಿಸದೆ pdf ಪ್ರತಿಯನ್ನು ಯಥಾಸ್ಥಿತಿಯಲ್ಲಿ ಯಾರು ಬೇಕಾದರೂ ಪ್ರಿಂಟ್ ಮಾಡಿಸಿ ಓದಲು ಬಳಸಬಹುದು ಅಥವಾ ಪರಿಸರದ ಬಗ್ಗೆ ಅರಿವು ಮೂಡಿಸಲು ಶಾಲೆಗಳಿಗೆ ನೀಡಬಹುದು.

Print Friendly, PDF & Email
Spread the love
error: Content is protected.