ನೀವೂ ಕಾನನಕ್ಕೆ ಬರೆಯಬಹುದು

ನೀವೂ ಕಾನನಕ್ಕೆ ಬರೆಯಬಹುದು

  ©ಮೊಹಮ್ಮದ್ ಮನ್ಸೂರ್

ಜನವರಿ 5ನೇ ದಿನಾಂಕವನ್ನು ‘ರಾಷ್ಟ್ರೀಯ ಪಕ್ಷಿ ದಿನ‘ವನ್ನಾಗಿ ಆಚರಿಸಲಾಗುತ್ತದೆ. ಪಕ್ಷಿಗಳು ಪರಿಸರದಲ್ಲಿನ ಹಾಡುಗಾರರು ಎಂದರೆ ತಪ್ಪಾಗಲಾರದು. ಪ್ರತೀ ಮುಂಜಾನೆ ಅವುಗಳ ಕಲರವದಿಂದ ಶುರುವಾಗದೇ ಇದ್ದರೆ ಏನೋ ಕಳೆದುಕೊಂಡಂತೆ ಭಾಸವಾಗುತ್ತದೆ. ಆದರೆ ಈ ಶತಮಾನದ ಅಂತ್ಯದಲ್ಲಿ ಸುಮಾರು 1200 ಪಭೇದದ ಪಕ್ಷಿಗಳು ಶಾಶ್ವತವಾಗಿ ಕಣ್ಮರೆಯಾಗಬಹುದು ಎಂಬ ವಿಜ್ಞಾನಿಗಳ ಅಂದಾಜನ್ನು ಕೇಳಿದರೆ ವಿಷಾದವಾಗುತ್ತದೆ. ಅಕ್ರಮ ವ್ಯಾಪಾರ, ಹವಾಮಾನ ಬದಲಾವಣೆ ಮತ್ತು ರೋಗಗಳು ಪಕ್ಷಿಗಳ ವಿನಾಶಕ್ಕೆ ಕಾರಣವಾಗುತ್ತವೆ. ಪಕ್ಷಿಗಳ ವರ್ಣರಂಜಿತ ಗರಿಗಳಿಗಾಗಿ ಮತ್ತು ಅವುಗಳ ಮಾಂಸಕ್ಕಾಗಿ ಅಕ್ರಮವಾಗಿ ಪಕ್ಷಿಗಳನ್ನು ಕೊಲ್ಲಲಾಗುತ್ತಿದೆ ಅಥವಾ ಅವುಗಳನ್ನು ಸೆರೆಹಿಡಿಯಲಾಗುತ್ತಿದೆ. ಈ ಅಕ್ರಮ ಚಟುವಟಿಕೆಗಳು ಹೀಗೆಯೇ ಮುಂದುವರೆದರೆ ಮುಂದಿನ ತಲೆಮಾರಿನ ಮಕ್ಕಳಿಗೆ ಪಕ್ಷಿಗಳ ಪರಿಚಯವೇ ಇಲ್ಲದಂತೆ ಆಗುತ್ತದೆ. ಆದ್ದರಿಂದ ಪಕ್ಷಿಗಳನ್ನು ರಕ್ಷಿಸುವ ಹೊಣೆ ನಮ್ಮೆಲ್ಲರ ಕೈಯಲ್ಲಿದೆ. ಈ ರೀತಿಯ ಕೆಲಸಗಳಲ್ಲಿ ನಾವೆಲ್ಲರು ಆದಷ್ಟು ಬೇಗ ಕಾರ್ಯ ಪ್ರವೃತ್ತರಾಗಬೇಕಿದೆ.

 ಇದೇ ರೀತಿಯ ಮಾಹಿತಿಗಳನ್ನು ನೀಡಲು ನೀವೂ ಕಾನನಕ್ಕೆ ಬರೆಯಬಹುದು.  ಈ ರೀತಿಯ ಪರಿಸರದ ಬಗೆಗಿನ ಮಾಹಿತಿಯನ್ನು ಒದಗಿಸಲು ಇರುವ ಕಾನನ ಇ-ಮಾಸಿಕಕ್ಕೆ ಮುಂದಿನ ತಿಂಗಳ ಸಂಚಿಕೆಗೆ ಲೇಖನಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಪರಿಸರಕ್ಕೆ ಸಂಬಂಧಿಸಿದ ಕಥೆ, ಕವನ, ಛಾಯಾಚಿತ್ರ, ಚಿತ್ರಕಲೆ, ಪ್ರವಾಸ ಕಥನಗಳನ್ನು ಕಾನನ ಮಾಸಿಕದ ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದು.

ಕಾನನ ಪತ್ರಿಕೆಯ ಇ-ಮೇಲ್ ವಿಳಾಸ: [email protected]
ಅಂಚೆ ವಿಳಾಸ:

ಅಡವಿ ಫೀಲ್ಡ್ ಸ್ಟೇಷನ್,
ಒಂಟೆಮಾರನ ದೊಡ್ಡಿ ಗ್ರಾಮ ,
ರಾಗಿಹಳ್ಳಿ ಅಂಚೆ,
ಜಿಗಣಿ ಹೋಬಳಿ,
ಆನೇಕಲ್ ತಾಲ್ಲೂಕು ,
ಬೆಂಗಳೂರು ನಗರ ಜಿಲ್ಲೆ
ಪಿನ್ ಕೋಡ್: 560083. ಗೆ ಕಳಿಸಿಕೊಡಬಹುದು.

ವಿಶೇಷ ಮನವಿ: ಕಾನನ ಪತ್ರಿಕೆಯು ಯುವ ಜನರಲ್ಲಿ, ಮಕ್ಕಳಲ್ಲಿ ಪರಿಸರದ ಪಸರನ್ನು ಹರಡಲು ಮತ್ತು ಪ್ರಕೃತಿ ಬಗ್ಗೆ ಜಾಗೃತಿ ಮೂಡಿಸಲು ಇರುವ ಮುಕ್ತ ವೇದಿಕೆಯಾಗಿದೆ.  ಈ ಪತ್ರಿಕೆಯ ವಿನ್ಯಾಸ, ವಿಷಯವನ್ನು ಬದಲಿಸದೆ pdf ಪ್ರತಿಯನ್ನು ಯಥಾಸ್ಥಿತಿಯಲ್ಲಿ ಯಾರು ಬೇಕಾದರೂ ಪ್ರಿಂಟ್ ಮಾಡಿಸಿ ಓದಲು ಬಳಸಬಹುದು ಅಥವಾ ಪರಿಸರದ ಬಗ್ಗೆ ಅರಿವು ಮೂಡಿಸಲು ಶಾಲೆಗಳಿಗೆ ನೀಡಬಹುದು.

Print Friendly, PDF & Email
Spread the love
error: Content is protected.