19th May 2026

ಕಾನನ

ನಿಸರ್ಗದೆಡೆಗೆ ಪಯಣ

ಕಲ್ಪನ ಎಂ ಅಜಯ್ ಕುಮಾರ್

ತುಮಕೂರಿನ ಚಿಕ್ಕನಾಯಕನಹಳ್ಳಿಯ ಬಸವಾಪಟ್ಟಣ ನನ್ನೂರು. ತಂದೆ ಮೂಡಲಗಿರಿಯಪ್ಪ, ತಾಯಿ ನೇತ್ರಾವತಿ ಜೊತೆಗೆ ನನ್ನ ಬಾಲ್ಯವನ್ನು ಚೆಂದಗಾಣಿಸಿದ ಸಹೋದರಿಯರಿಬ್ಬರು. ಅಕ್ಕ ರೋಹಿಣಿ, ತಂಗಿ ಅನುಪಮ. ಇದಿಷ್ಟು ನನ್ನ ಪರಿವಾರ. ಇತ್ತೀಚೆಗೆ ಅದು ವಿಸ್ತರಿಸಿದೆ.         ಓದಿದ್ದು ಬೆಳೆದದ್ದೆಲ್ಲಾ ಬೆಂಗಳೂರಿನಲ್ಲೇ. ಆದರೂ ನನ್ನ ಮನ ಸೆಳೆದದ್ದು ಮಾತ್ರ ನನ್ನ ಹುಟ್ಟೂರಿಗೆ. ಮಳೆಗಾಲದಲ್ಲಿ ಕೊಡೆ ಹಿಡಿದು ನಡೆಯುವುದು, ಇಷ್ಟದ ಹಾಡನ್ನು ಗುನುಗುನಿಸುವುದು, ಮಕ್ಕಳ ಸೈನ್ಯದ ಜೊತೆಗೆ ತೋಟವನ್ನೆಲ್ಲ ಸುತ್ತಿ ಬಂದು ಅಮ್ಮನ ಕೈಯಲ್ಲಿ ಬೈಗುಳ ಕೇಳುವುದು ನನ್ನಿಷ್ಟದ ಹವ್ಯಾಸಗಳು. ಜೊತೆಗೆ ಒಂದಷ್ಟು ಓದುವ, ಮನಸಿಗೆ ತೋಚಿದ್ದನ್ನ ಗೀಚುವ ಗೀಳೂ ಇದೆ ಅನ್ನಿ. ಆಗಾಗ ಸಣ್ಣ ನಾಟಕ ಬರೆದು ನಿರ್ದೇಶನವನ್ನೂ ಮಾಡಿದ್ದಿದೆ.            ಪ್ರಸ್ತುತ ಶ್ರೀ ಸಾರದಾದೇವಿ ವಿದ್ಯಾಕೇಂದ್ರ ಶಿವನಹಳ್ಳಿ, ಬೆಂಗಳೂರು ಇಲ್ಲಿ ಪ್ರೌಢಶಾಲಾ ಕನ್ನಡ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.  ಇಷ್ಟರಲ್ಲಿ ಅಜಯ್ ಕುಮಾರ್ ಅನ್ನುವವರೊಂದಿಗೆ ನನ್ನ ಮದುವೆಯೂ ಆಯಿತು. ಇದೀಗ ಮುಖ್ಯ ವಿಷಯಕ್ಕೆ ಬರುತ್ತೇನೆ. ನನಗೆ ಬರೆಯುವ ಗೀಳು ಅದೇಗೆ ಬಂತೋ ಗೊತ್ತಿಲ್ಲ. ಆದರೆ ನಾನು ಪ್ರೌಢಶಾಲೆಯಲ್ಲಿದ್ದಾಗ, ನನ್ನ ವಿಜ್ಞಾನ ಶಿಕ್ಷಕಿ ಪಿ. ವಿ ಲಲಿತಾರ  ಒತ್ತಾಯಕ್ಕೆ ಬರೆದ ಪದ್ಯ ಜಿಲ್ಲಾಮಟ್ಟದಲ್ಲಿ ಸದ್ದು ಮಾಡಿದ್ದು ನಾನೊಬ್ಬಳು ಹವ್ಯಾಸೀ ಬರಹಗಾರಳನ್ನಾಗಿ ಮಾಡಿತೇ? ಗೊತ್ತಿಲ್ಲ. ಆದರೆ ನನ್ನೊಳಗಿನ ಅದೆಷ್ಟೋ ವಿಚಾರಗಳಿಗೆ ಅಕ್ಷರರೂಪ ಕೊಟ್ಟದ್ದಕ್ಕೆ ಮಾತ್ರ ನಿಮ್ಮ ಮುಂದೆ ಹೀಗೆ ನಿಂತಿದ್ದೇನೆ ಅನ್ನುವುದು ಮಾತ್ರ ಸತ್ಯ. ಅದಕ್ಕೆ ಸ್ಫೂರ್ತಿ ಕೊಟ್ಟ ಅದೆಷ್ಟೋ ಹಿರಿಯ ಶಿಕ್ಷಕರು, ಅದರಲ್ಲೂ ನನ್ನದೇ ಆದ ಬರವಣಿಗೆ ಶೈಲಿ ರೂಪಿಸಿಕೊಳ್ಳುವಲ್ಲಿ ಬೆಂಬಲವಾಗಿದ್ದ ಕುಮಾರಸ್ವಾಮಿ ಸರ್ ಅವರನ್ನು ನೆನಪಿಸಿಕೊಳ್ಳಲೇಬೇಕು.

ನಾನೊಂದು ಬೀಜ ರೈತ ಹೊತ್ತು ಬಿತ್ತ ನೆಲದಲಿ;ಮಣ್ಣಲಿ ಮಣ್ಣಾಗಿ ಮುಳುಗಿದರೂಅವನಾರೋ ಮೇಘರಾಯನ ಸಹವಾಸದಿಟಿಸಿಲೊಡೆದು ಹೊಸ ಬದುಕ ಕಾಣುವಾಸೆ. ಕಂಡ ಕನಸು ನನಸಾಗಲು ಬೇಕಿದೆ ಪರಿಶ್ರಮಏನಾದರೇನು? ಪೊರೆ ಕಳಚಿ;...

© ಕಲ್ಪನ ಎಂ. ಈ ಕಾಲಘಟ್ಟದಲ್ಲಿ ಪ್ರಕೃತಿಯ ಭಾಗವಾಗಿಯೇ ಪ್ರಕೃತಿಗೆ ಹಾನಿಯಾಗದಂತೆ ಬದುಕುವುದನ್ನು ರೂಢಿಸಿಕೊಳ್ಳಲು ಹೊರಟವರಲ್ಲಿ ಅದೆಷ್ಟೋ ಕುತೂಹಲಿಗಳಿದ್ದಾರೆ. ಸಸ್ಯಪ್ರಬೇಧಗಳು, ಪ್ರಾಣಿಗಳು, ಆಹಾರ ಸರಪಳಿಯೊಂದಿಗೆ ಪರಿಸರ ತನ್ನಲ್ಲಿ...

© 2026 ಕಾನನ | WCG ಬೆಂಗಳೂರು | Newsphere by AF themes.
error: Content is protected.